Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ಹಸ್ತವು ಅವರಿಗೆ ವಿರೋಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ಹಸ್ತವು ಅವರಿಗೆ ವಿರೋಧವಾದದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ಅವರಿಗೆ ವಿರುದ್ಧವಾಗಿ ಇದ್ದುದರಿಂದ ಅವರೆಲ್ಲಾ ಸತ್ತು ಜನಸಮೂಹದಿಂದ ಇಲ್ಲವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:15
13 ತಿಳಿವುಗಳ ಹೋಲಿಕೆ  

ಇದರಿಂದ ಆತನು ಅವರನ್ನು ಅರಣ್ಯದಲ್ಲಿಯೇ ಬೀಳಿಸುವೆನೆಂದೂ,


ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.


ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. ಸೆಲಾ


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ದೇವರ ಹಸ್ತವು ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ, “ಇಸ್ರಾಯೇಲಿನ ದೇವರ ಮಂಜೂಷವನ್ನು ಹಾಗೆಯೇ ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ” ಅಂದರು.


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.


ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.


ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನು ಹೇಳುವುದೇನೆಂದರೆ, ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ; ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು