Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಮ್ಮ ದೇವರಾದ ಸರ್ವೇಶ್ವರ ಅವನನ್ನು ನಮ್ಮಿಂದ ಪರಾಜಯ ಪಡಿಸಿದರು. ನಾವು ಅವನನ್ನು, ಅವನ ಮಕ್ಕಳನ್ನು ಹಾಗು ಜನರೆಲ್ಲರನ್ನು ಸದೆಬಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ ಅವನ ಮಕ್ಕಳನ್ನೂ ಜನರೆಲ್ಲರನ್ನೂ ಸಂಹರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:33
14 ತಿಳಿವುಗಳ ಹೋಲಿಕೆ  

ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.


ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.


ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.


ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕ್ ಎಂಬ ಸ್ಥಳದಲ್ಲಿ ಹತ್ಯೆಮಾಡಿದರು.


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.


ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.


ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.


ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು