Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸುರುಬಿಡುವ ಒಬ್ಬರನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದರೆ ನಿಮಗೆ ವಾಗ್ದಾನ ಮಾಡಿದ ದೇಶದ ಪಟ್ಟಣಗಳನ್ನು ಸ್ವಾಧೀನ ಮಾಡುವಾಗ ನೀವು ಪಟ್ಟಣದಲ್ಲಿರುವವರೆಲ್ಲರನ್ನು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:16
25 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.


ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.


ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.


ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.


ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.


ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.


ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.


ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.


ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,


ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.


ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.


ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು