Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಳುಮಾಡಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧ ಆಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಿನ್ನತಕ್ಕ ಹಣ್ಣು ಕೊಡುವದಿಲ್ಲವೆಂದು ನೀವು ತಿಳಿದ ಮರಗಳನ್ನು ಮಾತ್ರ ನೀವು ಕೆಡಿಸಬಹುದು, ಕಡಿಯಬಹುದು. ಅವುಗಳಿಂದ ಯುದ್ಧಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:20
10 ತಿಳಿವುಗಳ ಹೋಲಿಕೆ  

ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.


ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,


ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.


ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.


ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.


ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.


ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,


ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು