Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:5
12 ತಿಳಿವುಗಳ ಹೋಲಿಕೆ  

ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.


ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.


ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.


ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.


ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು