Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:8
20 ತಿಳಿವುಗಳ ಹೋಲಿಕೆ  

ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.


ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.


ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು.


ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.


ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.


ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.


ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು