Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೂಳೆತನದಿಂದಾಗಲಿ ಗುದಮೈಥುನದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಮಂದಿರದೊಳಗೆ ತರಲೇಬಾರದು; ಈ ಎರಡೂ ಆತನಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:18
21 ತಿಳಿವುಗಳ ಹೋಲಿಕೆ  

ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?


ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.


ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಳ್ಳುವ ಹಾಗೆ, ಮೂಢನು ತಾನು ಮಾಡಿದ ಮೂರ್ಖತನವನ್ನೇ ಪುನಃ ಮಾಡುವನು.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.


“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.


“‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.


“‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.


ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.


ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.


ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು