Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀವೇ ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನುಬಿಡಿಸಿದರೆಂಬುದನ್ನು ನೆನಪುಮಾಡಿಕೊಳ್ಳಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಈಜಿಪ್ಟಿನಲ್ಲಿ ಬಡ ಗುಲಾಮರಾಗಿದ್ದುದನ್ನು ಸ್ಮರಿಸಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ನೀವು ಬಡವರಿಗೆ ದಯೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:18
8 ತಿಳಿವುಗಳ ಹೋಲಿಕೆ  

ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.


ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.


“‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು