Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು ಅವನ ಮುಖದ ಮೇಲೆ ಉಗುಳಿ - ಅಣ್ಣನಿಗೋಸ್ಕರ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು, ಕೆರವನ್ನು ಅವನ ಪಾದದಿಂದ ಬಿಡಿಸಿ, ಅವನ ಮುಖದಲ್ಲಿ ಉಗುಳಿ ಉತ್ತರಕೊಟ್ಟು, “ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು,” ಎಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:9
16 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.


ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.


ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.


ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.


ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.


ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಆಗ ಆ ಊರಿನ ಹಿರಿಯರು ಅವನನ್ನು ಕರೆಯಿಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, “ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ” ಎಂದು ಹೇಳುವ ಪಕ್ಷಕ್ಕೆ,


ಇಸ್ರಾಯೇಲರಲ್ಲಿ ಆ ಮನುಷ್ಯನ ಮನೆಯವರಿಗೆ, “ಕೆರವನ್ನು ಬಿಚ್ಚಿಸಿಕೊಂಡವನ ಮನೆಯವರು” ಎಂದು ಹೆಸರುಂಟಾಗುವುದು.


ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು