Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಸರ್ವೇಶ್ವರಾ, ನೀವು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು’ ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿಟ್ಟು ಅವರನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂವಿುಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈಗ, ಯೆಹೋವನೇ, ನೀನು ಕೊಟ್ಟ ದೇಶದಲ್ಲಿ ಬೆಳೆದ ಬೆಳೆಯಲ್ಲಿ ಪ್ರಥಮ ಫಲಗಳನ್ನು ತಂದಿದ್ದೇನೆ.’ “ಆ ಪ್ರಥಮ ಬೆಳೆಯನ್ನು ನಿಮ್ಮ ದೇವರಾದ ಯೆಹೋವನ ಮುಂದೆ ಇಟ್ಟು ಆತನನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:10
21 ತಿಳಿವುಗಳ ಹೋಲಿಕೆ  

ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.


ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.


ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.


ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.


ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.


ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ, ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವುದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು