Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ತಾಯಿತಂದೆಯಿಲ್ಲದವರೂ ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಪ್ರತೀ ಮೂರನೆಯ ವರ್ಷವು ದಶಮಾಂಶದ ವರ್ಷವಾಗಿರುವುದು. ಆಗ ನಿಮ್ಮ ಬೆಳೆಯ ಹತ್ತನೆಯ ಒಂದು ಅಂಶವನ್ನು ಲೇವಿಯರಿಗೂ ಪರದೇಶಸ್ಥರಿಗೂ ಅನಾಥರಿಗೂ ವಿಧವೆಯರಿಗೂ ಕೊಡಬೇಕು. ಆಗ ಅವರಿಗೆ ಊಟಮಾಡಲು ಸಾಕಷ್ಟು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:12
11 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ಸ್ವತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ಲೇವಿಯರಿಗೆ ‘ಇತರ ಇಸ್ರಾಯೇಲರೊಂದಿಗೆ ಪಾಲು ದೊರೆಯುವುದಿಲ್ಲ’” ಎಂದು ಹೇಳಿದ ಮಾತಿಗೆ ಇದೇ ಕಾರಣ.


“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.


ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.


ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.


ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.


ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು