Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ‘ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯನಿಗೆ, ಪರದೇಶಿಗೆ, ತಾಯಿತಂದೆ ಇಲ್ಲದ ವ್ಯಕ್ತಿಗೆ, ವಿಧವೆಗೆ ಇಂಥವರಿಗೆ ಕೊಟ್ಟು ಇದ್ದೇವೆ, ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯ, ಪರದೇಶಿ, ತಾಯಿತಂದೆಯಿಲ್ಲದವ, ವಿಧವೆ ಇಂಥವರಿಗೆ ಕೊಟ್ಟಿದ್ದೇವೆ; ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲೂ ಇಲ್ಲ ಮರೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ದೇವರಾದ ಯೆಹೋವನಿಗೆ ನೀನು ಹೀಗೆ ಹೇಳಬೇಕು: ‘ನನ್ನ ಮನೆಯೊಳಗಿಂದ ನನ್ನ ಬೆಳೆಯ ಪರಿಶುದ್ಧ ಭಾಗವನ್ನು ತೆಗೆದು ಲೇವಿಯರಿಗೆ, ಪರದೇಶಸ್ಥರಿಗೆ, ಅನಾಥರಿಗೆ, ವಿಧವೆಯರಿಗೆ ಕೊಟ್ಟಿರುತ್ತೇನೆ. ನಿನ್ನ ಕಟ್ಟಳೆಗಳನ್ನೆಲ್ಲಾ ಅನುಸರಿಸಿದ್ದೇನೆ. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನಿರಾಕರಿಸಲಿಲ್ಲ, ನಾನು ಅವುಗಳನ್ನು ಮರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, “ನಾವು ಮೀಸಲಿಟ್ಟ ಪರಿಶುದ್ಧ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದು, ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರಿಗೆ, ಪರದೇಶಿಗೆ, ತಂದೆತಾಯಿ ಇಲ್ಲದವರಿಗೆ, ವಿಧವೆಯರಿಗೆ ಕೊಟ್ಟಿದ್ದೇವೆ. ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:13
19 ತಿಳಿವುಗಳ ಹೋಲಿಕೆ  

ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.


ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.


ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.


ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,


ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.


ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.


ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು