Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾವು ಸತ್ತವರಿಗಾಗಿ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದು ಹಾಕಲಿಲ್ಲ; ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಟ್ಟು ನೀವು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:14
14 ತಿಳಿವುಗಳ ಹೋಲಿಕೆ  

ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.


ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.


ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.


ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.


ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ನಾವು ಪ್ರತ್ಯೇಕಿಸಿದ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದಿದ್ದೇವೆ. ನೀನು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರು, ಪರದೇಶಿಗಳು, ಅನಾಥರು, ವಿಧವೆಯರು ಇಂಥವರಿಗೆ ಕೊಟ್ಟಿದ್ದೇವೆ ನಿನ್ನ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ ಮತ್ತು ಮರೆಯಲೂ ಇಲ್ಲ.


ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.


ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನೀವು ಅಭಿವೃದ್ಧಿ ಹೊಂದುವುದರಿಂದ ನಿಮ್ಮಲ್ಲಿ ಬಡವರೇ ಇರುವುದಿಲ್ಲ.


ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು