Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದರ ಮೇಲೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಬರೆಯಿರಿ. ನೀವು ನದಿಯನ್ನು ದಾಟಿದಾಗ ಈ ಕಾರ್ಯವನ್ನು ಮಾಡಬೇಕು. ಅನಂತರ, ಆತನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಸಮೃದ್ಧಿಯಾದ ದೇಶದೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಪ್ರಕಾರ ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಹಾಲೂ ಜೇನೂ ಹರಿಯುವಂಥ ದೇಶವನ್ನು ನೀವು ಪ್ರವೇಶಿಸುವಂತೆ ಯೊರ್ದನ್ ನದಿಯನ್ನು ದಾಟುವಾಗ, ಅವುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಆ ಕಲ್ಲಿನ ಮೇಲೆ ಬರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:3
14 ತಿಳಿವುಗಳ ಹೋಲಿಕೆ  

ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.


ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.


“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.


ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.


ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.


ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.


ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು