Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಭೂಮಿಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನಿಮ್ಮ ದೇಶದಲ್ಲಿ ವಾಸಿಸುವವರೆಲ್ಲರೂ ನೀವು ದೇವರ ಹೆಸರಿನಿಂದ ಕರೆಯಲ್ಪಟ್ಟವರೆಂಬುದನ್ನು ನೋಡುವಾಗ ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಭೂಲೋಕದ ಜನರೆಲ್ಲರೂ, ನೀವು ಯೆಹೋವ ದೇವರ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:10
18 ತಿಳಿವುಗಳ ಹೋಲಿಕೆ  

ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.


ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


“ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.


ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.


ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು


ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು