Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮೆದುರಾಗಿ ಬಲಾತ್ಕಾರದಿಂದ ಹಿಡಿದುಕೊಂಡುಹೋಗಿ ನಿಮಗೆ ಹಿಂದಕ್ಕೆ ಕೊಡುವದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆಯೇ ಕೊಯ್ಯುವರು, ಆದರೆ ನೀವು ಅದರ ಮಾಂಸ ತಿನ್ನುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಕಣ್ಣ ಮುಂದೆಯೇ ಬಲಾತ್ಕಾರದಿಂದ ತೆಗೆದುಕೊಂಡು ಹೋಗುವರು. ಅದು ನಿಮಗೆ ಮತ್ತೆ ಸಿಕ್ಕುವುದಿಲ್ಲ. ನಿಮ್ಮ ಕುರಿಗಳು ನಿಮ್ಮ ಶತ್ರುವಿಗೆ ಕೊಡಲಾಗುವುದು. ಅವುಗಳನ್ನು ಬಿಡಿಸುವುದಕ್ಕೆ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:31
8 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.


ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.


ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.


ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.


ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು