Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54-55 ಶತ್ರುಗಳು ನಿಮ್ಮ ಪಟ್ಟಣಗಳಿಗೆಲ್ಲಾ ಮುತ್ತಿಗೆ ಹಾಕಿ, ನಿಮ್ಮನ್ನು ಭೀಕರವಾದ ಬಿಕ್ಕಟ್ಟಿಗೆ ಸಿಕ್ಕಿಸುವರು. ಆಗ ನಿಮ್ಮಲ್ಲಿ ಮೃದುಸ್ವಭಾವಿ ಹಾಗು ಅತಿ ಸುಕುಮಾರ ಆದವನೂ ಕೂಡ ತನಗೇ ತಿನ್ನಲಿಕ್ಕೆ ಏನೂ ಉಳಿಯದೆ, ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು, ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಸಿಂಡರಿಸಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54-55 ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ನಿಮ್ಮಲ್ಲಿ ಮೃದುಸ್ವಭಾವಿಯೂ ಅತಿಸುಕುಮಾರನೂ ಆಗಿರುವವನೂ ತನಗೆ ತಿನ್ನಲಿಕ್ಕೆ ಏನೂ ಉಳಿಯದೆಹೋದದರಿಂದ ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯಳಾದ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಯನ್ನು ಕಪ್ಪುಮಾಡಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 “ನಿಮ್ಮಲ್ಲಿರುವ ಮೃದುವಾದ ಮತ್ತು ಕನಿಕರವುಳ್ಳ ಮನುಷ್ಯನೂ ಬೇರೆಯವರಿಗೆ ಕ್ರೂರಿಯಾಗುವನು; ತನ್ನನ್ನು ಬಹಳವಾಗಿ ಪ್ರೀತಿಸುವ ಹೆಂಡತಿಗೂ ಅವನು ಕ್ರೂರಿಯಾಗುವನು; ಇನ್ನೂ ಜೀವಂತವಾಗಿರುವ ತನ್ನ ಮಕ್ಕಳಿಗೂ ಅವನು ಕ್ರೂರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಸಹ ತನ್ನ ಸ್ವಂತ ಸಹೋದರ ಅಥವಾ ಅವನು ಪ್ರೀತಿಸುವ ಹೆಂಡತಿ ಅಥವಾ ಉಳಿದಿರುವ ಮಕ್ಕಳ ಮೇಲೆ ಅನುಕಂಪ ತೋರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:54
14 ತಿಳಿವುಗಳ ಹೋಲಿಕೆ  

ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,


ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.


ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.


ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.


ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.


ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.


ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.


ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು