Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:62 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆ ಹೋಗುವುದರಿಂದ ಸ್ವಲ್ಪ ಜನರಾಗಿಯೇ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು ನಿಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಡದೆಹೋದದರಿಂದ ಸ್ವಲ್ಪಮಂದಿಯೇ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

62 ನೀವು ಆಕಾಶದ ನಕ್ಷತ್ರದಷ್ಟು ಅಸಂಖ್ಯಾತರಾಗಿದ್ದರೂ ನಿಮ್ಮಲ್ಲಿ ಕೆಲವರೇ ಉಳಿದುಕೊಳ್ಳುವರು. ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೇ ಹೋದದ್ದರಿಂದ, ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯಾತರಾಗಿರುವ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:62
18 ತಿಳಿವುಗಳ ಹೋಲಿಕೆ  

ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.


ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.


ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮ ಮಕ್ಕಳನ್ನು ಕದ್ದುಕೊಂಡು ಹೋಗುವವು, ನಿಮ್ಮ ಪಶುಗಳನ್ನು ಕೊಲ್ಲುವವು, ನಿಮ್ಮನ್ನು ಸ್ವಲ್ಪ ಜನರನ್ನಾಗಿ ಮಾಡುವವು; ನಿಮ್ಮ ದಾರಿಗಳು ಪಾಳು ಬೀಳುತ್ತದೆ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.


ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು