ಧರ್ಮೋಪದೇಶಕಾಂಡ 29:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
23 ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,
23 ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.
23 ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -
23 ನಿಮ್ಮ ದೇಶವೆಲ್ಲಾ ನಿಷ್ಪ್ರಯೋಜಕವಾಗಿರುವುದು. ಅದರ ಮೇಲೆ ಉಪ್ಪೂ ಗಂಧಕವೂ ತುಂಬಿರುವುದು. ಅದರ ಮೇಲೆ ಯಾವ ಸಸಿಯೂ ಬೆಳೆಯಲಾರದು; ಕೂಳೆಯೂ ಬೆಳೆಯುವುದಿಲ್ಲ. ಸೊದೋಮ್, ಗೊಮೋರ, ಅದ್ಮಾ ಮತ್ತು ಚೆಬೋಯೀಮ್ ಎಂಬ ಪಟ್ಟಣಗಳು ಯೆಹೋವನ ಕೋಪದ ನಿಮಿತ್ತ ನಾಶವಾದಂತೆ ನಿಮ್ಮ ದೇಶವೂ ನಾಶವಾಗುವುದು.
23 ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.
ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.
“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.
“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.
ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು.