Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ಅವರಿಗೆ ಭಯಪಡಬೇಡಿ; ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ನಿಮ್ಮ ಕಡೆಯವರಾಗಿ ಯುದ್ಧಮಾಡುವರು’ ಎಂದು ಆಜ್ಞಾಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಕಡೆಯವನಾಗಿ ಯುದ್ಧಮಾಡುವನು ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಪ್ರಾಂತ್ಯದ ಅರಸುಗಳಿಗೆ ನೀನು ಹೆದರಬೇಡ. ನಿನ್ನ ದೇವರಾದ ಯೆಹೋವನು ನಿನಗಾಗಿ ಯುದ್ಧ ಮಾಡುವನು’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:22
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.


ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.


ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.


ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.


ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.


ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.


ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.


ಆ ಕಾಲದಲ್ಲಿ ನಾನು ಯೆಹೋವನಿಗೆ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧ ಮಾಡುವನು” ಎಂದು ಹೇಳಿದೆನು.


ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು