Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:1
25 ತಿಳಿವುಗಳ ಹೋಲಿಕೆ  

“ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.


ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.


“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಯೆಹೋವನು ಅವರ ದೇಶದ ಮೇಲೆ ಕೋಪಮಾಡಿ, ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದನು.


ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು