Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡ ಸ್ಥಳದಲ್ಲಿ, ಇಸ್ರಯೇಲರೆಲ್ಲರು ಅವರ ಸನ್ನಿಧಿಗೆ ಕೂಡಿಬಂದಾಗ ಅವರೆಲ್ಲರಿಗೂ ಕೇಳಿಸುವಂತೆ ನೀವು ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲ್ಯರೆಲ್ಲರು ಆತನ ಸನ್ನಿಧಿಗೆ ಕೂಡಿ ಬಂದಾಗ ನೀವು ಅವರೆಲ್ಲರಿಗೂ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:11
17 ತಿಳಿವುಗಳ ಹೋಲಿಕೆ  

ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.


ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.


ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.


ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು.


ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.


ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು