Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರು ಸಹ ಇವನ್ನು ಕೇಳಿ, ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ವಾಸವಾಗಿರುವವರೆಗೂ, ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಲು ಕಲಿತುಕೊಳ್ಳುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಕಲಿತುಕೊಳ್ಳುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರ ಸಂತತಿಯವರಿಗೆ ಯೆಹೋವನ ಕಟ್ಟಳೆಯ ಬಗ್ಗೆ ಗೊತ್ತಿಲ್ಲದಿದ್ದರೆ ಅವರು ಬೋಧನಾಪುಸ್ತಕ ಓದುವಾಗ ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಲು ಅವರು ಅದರಿಂದ ಕಲಿತುಕೊಳ್ಳುವರು; ನೀವು ಜೋರ್ಡನ್ ನದಿ ದಾಟಿಹೋಗಿ ವಶಪಡಿಸಿಕೊಳ್ಳಲಿರುವ ದೇಶದಲ್ಲಿ ನೀವು ವಾಸವಾಗಿರುವ ತನಕ ಅವರು ಗೌರವಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರ ಈ ನಿಯಮವನ್ನು ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವುದಕ್ಕೆ ಕಲಿತುಕೊಳ್ಳಿರಿ, ಎಂದು ಅವರಿಗೆ ಆಜ್ಞಾಪಿಸಿ ಹೇಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:13
11 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,


ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.


ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು.


ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.


ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು