Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:17
43 ತಿಳಿವುಗಳ ಹೋಲಿಕೆ  

ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.


ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.


ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.


ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.


ಯೆಹೋವನು ನಿಮ್ಮ ಸಂಗಡ ಇರುವುದಿಲ್ಲ, ಹತ್ತಬೇಡಿರಿ. ನೀವು ಶತ್ರುಗಳ ಮುಂದೆ ನಿಲ್ಲಲಾರದೆ ಬಿದ್ದು ಸತ್ತುಹೋಗುವಿರಿ.


ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.


ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.


ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ?


ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.


ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.


“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.


ಯಾಕೋಬಿನ ಮನೆತನದವರು ಪೂರ್ವದೇಶಗಳಲ್ಲಿ ಮಂತ್ರತಂತ್ರಗಳಲ್ಲಿ ಮಗ್ನರೂ, ಫಿಲಿಷ್ಟಿಯರ ಹಾಗೆ ಕಣಿ ಹೇಳುವವರೂ, ಅನ್ಯದೇಶಗಳವರ ಸಂಗಡ ಒಪ್ಪಂದ ಮಾಡುವವರೂ ಆಗಿರುವುದರಿಂದ ಯೆಹೋವನೇ ಈ ನಿನ್ನ ಜನರನ್ನು ಕೈಬಿಟ್ಟಿದ್ದೀ.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”


ನೀವು ಅವರಿಗೆ ಹೆದರಿಕೊಳ್ಳಬೇಡಿರಿ; ನಿಮ್ಮ ದೇವರಾದ ಯೆಹೋವನು ನಿಮ್ಮ ಮಧ್ಯದಲ್ಲಿದ್ದಾನೆ; ಆತನು ನಮ್ಮ ಭಕ್ತಿಗೆ ಪ್ರತಿಕಾರವಾಗಿ ವಿಸ್ಮಯ ಹುಟ್ಟಿಸುವ ದೇವರಾಗಿದ್ದಾನೆ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನ ವರೆಗೂ ಅವರ ಶತ್ರುಗಳಾಗಿಯೇ ಇದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಹೀಗಾಯಿತು.


ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.


ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಆಹಾ, ನನ್ನ ಪ್ರಜೆಯೆಂಬಾಕೆಯು, “ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ?” ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. ಅದಕ್ಕೆ ಯೆಹೋವನು, “ಇವರು ತಮ್ಮ ವಿಗ್ರಹಗಳಿಂದಲೂ, ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ” ಎಂದು ನುಡಿಯುತ್ತಾನೆ.


ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು