Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅವರಿಗೆ - ನಾನು ಈಗ ನೂರಿಪ್ಪತ್ತು ವರುಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವದು ಇನ್ನು ನನ್ನಿಂದಾಗದು; ಯೆಹೋವನು ನನಗೆ - ನೀನು ಈ ಯೊರ್ದನ್ ಹೊಳೆಯನ್ನು ದಾಟಕೂಡದೆಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ಈ ಹೊತ್ತು ನೂರ ಇಪ್ಪತ್ತು ವರ್ಷದವನಾಗಿದ್ದೇನೆ. ಇನ್ನು ಮುಂದೆ ನಿಮ್ಮನ್ನು ಮುನ್ನಡೆಸಲು ನನಗೆ ಸಾಧ್ಯವಾಗುತ್ತಿಲ್ಲ. ಇದಲ್ಲದೆ ಯೆಹೋವ ದೇವರು ನನಗೆ, ‘ನೀನು ಈ ಯೊರ್ದನನ್ನು ದಾಟುವುದಿಲ್ಲ,’ ಎಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:2
17 ತಿಳಿವುಗಳ ಹೋಲಿಕೆ  

ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.


ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.


ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.


ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.


“ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.


ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;


ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು