Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ತಿಳಿದಿದೆ, ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಹೋದ ಮೇಲೆ ನೀವು ದ್ರೋಹಿಗಳಾಗಿ ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರೆಂದೂ ಅನಂತರದಲ್ಲಿ ನೀವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ ದುರಾಚಾರಿಗಳಾಗಿ ಆತನನ್ನು ಕೋಪಗೊಳಿಸುವದರಿಂದ ನಿಮಗೆ ಆಪತ್ತುಗಳು ಉಂಟಾಗುವವೆಂದೂ ನಾನು ಬಲ್ಲೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:29
28 ತಿಳಿವುಗಳ ಹೋಲಿಕೆ  

ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.


ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.


ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.


ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.


ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ, ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.


ನೀವು ಸ್ತ್ರೀಪುರುಷರ ರೂಪವನ್ನಾಗಲಿ,


ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.


ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.


ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು