Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ, ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲರನ್ನು ಹೊತ್ತುಕೊಂಡು ಅವರನ್ನು ಸಂರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹದ್ದು ತನ್ನ ಮರಿಗಳನ್ನು ಗೂಡಿನೊಳಗಿಂದ ಹೊರಡಿಸಿ ಅವುಗಳ ಬಳಿಯಲ್ಲಿ ಹಾರಾಡುವಂತೆ ಯೆಹೋವನು ತನ್ನ ರೆಕ್ಕೆಗಳನ್ನು ಚಾಚಿ ಇಸ್ರಾಯೇಲ್ಯರನ್ನು ಆತುಕೊಂಡದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು! ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, ತನ್ನ ರೆಕ್ಕೆಗಳನ್ನು ಚಾಚಿ, ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:11
13 ತಿಳಿವುಗಳ ಹೋಲಿಕೆ  

‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.


ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.


ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.


ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.


ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.


ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.


ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.


ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.


ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು