Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಅವರನ್ನು ಭೂವಿುಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯವೃದ್ಧಿಯನ್ನುಂಟುಮಾಡಿ ಬಂಡೆಯಿಂದ ಜೇನೂ ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು. ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, ಬಂಡೆಯಿಂದ ಜೇನೂ, ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:13
16 ತಿಳಿವುಗಳ ಹೋಲಿಕೆ  

ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.


ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.


“ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.


ಯೆಶುರೂನೇ, ನಿಮ್ಮ ದೇವರಿಗೆ ಸಮಾನರು ಯಾರು ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.


ಆತನು ಐಗುಪ್ತ ದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ವಿಷಸರ್ಪಗಳೂ ಮತ್ತು ಚೇಳುಗಳೂ ಇದ್ದ ಆ ಘೋರವಾದ ಮಹಾ ಅರಣ್ಯವನ್ನೂ, ನೀರು ಬತ್ತಿಹೋದ ಭೂಮಿಗಳನ್ನೂ ದಾಟಿಸಿದ್ದನ್ನು ಮತ್ತು ಗಟ್ಟಿಯಾದ ಬಂಡೆಯೊಳಗಿಂದ ನೀರು ಹೊರಡಿಸಿದ್ದನ್ನು ಮರೆಯಬೇಡಿರಿ.


ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ


ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ.


ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.


ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.


ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು