Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:26
13 ತಿಳಿವುಗಳ ಹೋಲಿಕೆ  

ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.


ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.


ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.


ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.


ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು