ಧರ್ಮೋಪದೇಶಕಾಂಡ 32:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡಿಸುವದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಯಥಾರ್ಥನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು. ಅಧ್ಯಾಯವನ್ನು ನೋಡಿ |