Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:41
29 ತಿಳಿವುಗಳ ಹೋಲಿಕೆ  

ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.


ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ,


ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”


ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.


ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.


ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.


ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.


ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.


ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.


ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು