Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:46
15 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.


ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.


ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ,


ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.


ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.


ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ: “ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!


ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.


ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು