Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:8
23 ತಿಳಿವುಗಳ ಹೋಲಿಕೆ  

ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.


ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.


ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಎಬರನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಒಬ್ಬನಿಗೆ ಪೆಲೆಗೆಂಬ ಹೆಸರು; ಅವನ ಕಾಲದಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತ್ತು. ಅವನ ತಮ್ಮನ ಹೆಸರು ಯೊಕ್ತಾನ್.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.


ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!


“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.


ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.


ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.


ಭೂಮಿಯ ಎಲ್ಲಾ ಮೇರೆಗಳನ್ನು ಸ್ಥಾಪಿಸಿದವನು ನೀನು; ಬೇಸಿಗೆ ಮತ್ತು ಚಳಿಗಾಲಗಳನ್ನು ನೇಮಿಸಿದವನು ನೀನು.


ಹೀಗಿರಲು ಯೆಹೋವನ ಸಭೆಯವರ ಭೂಮಿಯ ಮೇಲೆ ಚೀಟು ಹಾಕಿ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವುದಿಲ್ಲ.


ದೇಶ, ಭಾಷೆ, ಕುಲ, ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ನೀವು ಇನ್ನೂ ಬಹು ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳು ಆಗಿರುವಾಗಲೇ


ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು