Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:10
37 ತಿಳಿವುಗಳ ಹೋಲಿಕೆ  

ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.


ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.


ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.


ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.


ಅವನು ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಆ ಧೂಪದ ಹೊಗೆಯು ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಆವರಿಸಿಕೊಳ್ಳುವುದು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.


ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.


“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯಾಜಕರ ಹತ್ತಿರ ಹೋಗಿ,


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು