Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸೋದರರಿಗೆ ಸಾಮ್ರಾಟನಾದ ಜೋಸೆಫನ ಪಾಲಿಗೆ ಬರಲಿ ಇವನ ಕುಲದ ಮೇಲೆ ನೆಲಸಲಿ ನೆಲಬೆಳೆಸುವ ಫಲಗಳಲಿ ಶ್ರೇಷ್ಠವಾದುದೆಲ್ಲವು ಮುಳ್ಳುಪೊದೆಯಲಿ ಕಾಣಿಸಿಕೊಂಡಾತನ ದಯೆಯು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಭೂವಿುಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ [ಹೋರೇಬ್‍ಬೆಟ್ಟದಲ್ಲಿನ] ಮುಳ್ಳುಗಿಡದಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಕುಲದವರ ಶಿರಸ್ಸಿನ ಮೇಲೆ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:16
22 ತಿಳಿವುಗಳ ಹೋಲಿಕೆ  

“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.


ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’


ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.


ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು.


ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.


ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.


ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.


ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.


“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”


ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.


ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು.


ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು