Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು; ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು [ಬಲವುಳ್ಳವು]; ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೋಟ್ಯಾಂತರ ಜನರೂ ಮನಸ್ಸೆಕುಲದ ಲಕ್ಷಾಂತರ ಮಂದಿಯೂ ಇಂಥವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ. ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:17
27 ತಿಳಿವುಗಳ ಹೋಲಿಕೆ  

ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.


ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.


ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.


ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.


ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲ್ ನನಗೆ ಮರೆಯಾಗಿಲ್ಲ; ಎಫ್ರಾಯೀಮೇ, ನೀನೀಗ ವ್ಯಭಿಚಾರ ಮಾಡಿದ್ದಿ, ಇಸ್ರಾಯೇಲ್ ಹೊಲೆಯಾಗಿದೆ.


ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.


ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.


ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.


ಹನ್ನಳು ದೇವರ ಬಳಿ ಹೀಗೆ ವಿಜ್ಞಾಪಿಸಿದಳು, “ನನ್ನ ಹೃದಯವು ಯೆಹೋವನಲ್ಲಿ ಉಲ್ಲಾಸಿಸುತ್ತದೆ; ನನ್ನ ಕೊಂಬು ಯೆಹೋವನಿಂದ ಎತ್ತಲ್ಪಟ್ಟಿದೆ. ಶತ್ರುಗಳ ಮುಂದೆ ನನ್ನ ಬಾಯಿ ಧೈರ್ಯವಾಗಿ ಮಾತನಾಡುತ್ತದೆ, ಯಾಕೆಂದರೆ ನಾನು ನಿನ್ನ ರಕ್ಷಣೆಯಲ್ಲಿ ಆನಂದಿಸುತ್ತೇನೆ.


ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.


ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು


ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.


ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.


ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು