Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಅನುಸರಿಸಬೇಕೆಂದು ಆತನು ನೇಮಿಸಿದ ನಿಬಂಧನೆಯನ್ನು ಅಂದರೆ ಹತ್ತು ಆಜ್ಞೆಗಳನ್ನು ನಿಮಗೆ ವಿವರಿಸಿ, ಎರಡು ಕಲ್ಲಿನ ಹಲಗೆಗಳಲ್ಲಿ ಅದನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:13
18 ತಿಳಿವುಗಳ ಹೋಲಿಕೆ  

ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.


ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.


ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.


ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.


ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು.


ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.


ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.


ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು