Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:20
24 ತಿಳಿವುಗಳ ಹೋಲಿಕೆ  

ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.


ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.


ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.


ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.


ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು