Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಿಮ್ಮ ದೆಸೆಯಿಂದ ಯೆಹೋವನು ನನ್ನ ಮೇಲೆ ಸಿಟ್ಟುಗೊಂಡನು. ಆ ಕಾರಣದಿಂದ ಕಾನಾನ್ ದೇಶವನ್ನು ನಾನು ಪ್ರವೇಶಿಸಬಾರದು ಎಂದು ನನಗೆ ಹೇಳಿರುತ್ತಾನೆ. ಜೋರ್ಡನ್ ನದಿಯಾಚೆ ನಿಮಗೆ ಕೊಡುವ ಆ ಉತ್ತಮ ದೇಶವನ್ನು ನಾನು ನೋಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:21
13 ತಿಳಿವುಗಳ ಹೋಲಿಕೆ  

ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;


ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.


ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.


ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವತ್ತಿಗೆ ಸೇರಿ ನೀವು ಇನ್ನೂ ವಿಶ್ರಾಂತಿ ಹೊಂದಲಿಲ್ಲವಲ್ಲಾ.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,


ನರಹತ್ಯಮಾಡಿದವರು ಆ ನಗರಗಳಿಗೆ ಓಡಿಹೊಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಗಳನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ದೇಶವನ್ನು ಮೂರು ಭಾಗ ಮಾಡಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.


ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು