Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:27
23 ತಿಳಿವುಗಳ ಹೋಲಿಕೆ  

ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.


“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.


ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.


ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.


ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.


ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.


ಆದರೂ ಎಣ್ಣೆಯ ಮರದ ಕಾಯಿಗಳನ್ನು ಉದುರಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ, ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲುಹಣ್ಣುಗಳು ಅದರಲ್ಲಿ ಉಳಿದಿರುವುದು” ಎಂದು ಇಸ್ರಾಯೇಲರ ದೇವರಾದ ಯೆಹೋವನು ನುಡಿಯುತ್ತಾನೆ.


ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.


ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.


ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.


ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”


ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.


“ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’


ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು