Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:36
12 ತಿಳಿವುಗಳ ಹೋಲಿಕೆ  

ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು.


ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.


ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.


ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.


ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು