Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹಾಗಿದ್ದರೂ ಈಗ ನಾವೇಕೆ ಪ್ರಾಣಾಪಾಯಕ್ಕೆ ಗುರಿಯಾಗಬೇಕು? ಬಹುಶಃ ಈ ಘೋರ ಬೆಂಕಿ ನಮ್ಮನ್ನು ದಹಿಸಿಬಿಡಬಹುದು; ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ನಾವು ಮತ್ತೆ ಕೇಳಿದರೆ ಸಾಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿಬಿಟ್ಟೀತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರಿಗಿ ಕೇಳಿದರೆ ಸತ್ತೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹಾಗಾದರೆ ಈಗ ನಾವು ಏಕೆ ಸಾಯಬೇಕು? ಈ ದೊಡ್ಡ ಬೆಂಕಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವುದು. ನಾವು ಇನ್ನೂ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿದರೆ ಸಾಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:25
12 ತಿಳಿವುಗಳ ಹೋಲಿಕೆ  

ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ.


ಏಕೆಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.


“ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಪ್ರಜ್ವಲಿಸಿ, ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು.


“ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.


ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು