Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯಬಾರದು, ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:12
22 ತಿಳಿವುಗಳ ಹೋಲಿಕೆ  

ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆಯದೆ ಇರಬೇಕು. ಅನ್ಯದೇವತೆಗಳನ್ನು ಪೂಜಿಸಬಾರದು.


ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.


ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.


ಇಸ್ರಾಯೇಲರೇ, ನಿಮ್ಮನ್ನು ಹುಟ್ಟಿಸಿದ ತಂದೆಯಂತಿರುವ ಶರಣನನ್ನು ನೀವು ಸ್ಮರಿಸಲಿಲ್ಲ; ಹೆತ್ತ ತಾಯಿಯಂತಿರುವ ದೇವರನ್ನು ಮರೆತುಬಿಟ್ಟಿರಿ.


ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.


ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.


ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.


ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!


ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.


ಏಕೆಂದರೆ ನೀನು ನಿನ್ನ ರಕ್ಷಕನಾದ ದೇವರನ್ನು ಮರೆತುಬಿಟ್ಟು, ನಿನ್ನ ಆಶ್ರಯಗಿರಿಯನ್ನು ಸ್ಮರಿಸಲಿಲ್ಲ. ಹೀಗಿರಲು ನೀನು ಇಷ್ಟವಾದ ದ್ರಾಕ್ಷಿಯ ಗಿಡಗಳನ್ನು ನೆಟ್ಟು, ನಿನ್ನ ದೇಶದಲ್ಲಿ ದೇಶಾಂತರದ ಸಸಿಗಳನ್ನು ನೆಟಿದ್ದಿ.


“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು