Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ನಾಡಿಗೆ ನಮ್ಮನ್ನು ಸೇರಿಸುವುದಕ್ಕೆ ಈಜಿಪ್ಟಿನಿಂದ ನಮ್ಮನ್ನು ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತಾನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನದಂತೆ ನಮಗೆ ಆ ದೇಶವನ್ನು ಕೊಡುವುದಕ್ಕಾಗಿ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:23
7 ತಿಳಿವುಗಳ ಹೋಲಿಕೆ  

ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.


ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.


ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.


ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,


ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು