Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 7:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ಅದು ಶಾಪಗ್ರಸ್ತವಾದ್ದರಿಂದ ಅಸಹ್ಯಪಟ್ಟು ಅದನ್ನು ಮುಟ್ಟಲೂಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದು ಕೇವಲ ಯೆಹೋವನದಾಗುವದಕ್ಕೆ ನಾಶವಾಗತಕ್ಕದ್ದಾಗಿರುವದರಿಂದ ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 7:26
15 ತಿಳಿವುಗಳ ಹೋಲಿಕೆ  

“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.


ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.


ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?


“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.


ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು