Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿ. ಅನ್ಯದೇವರುಗಳನ್ನು ಅನುಸರಿಸಬೇಡಿ. ಅವುಗಳನ್ನು ಪೂಜಿಸಬೇಡಿ; ಅವುಗಳ ಸೇವೆ ಮಾಡಬೇಡಿ. ಇಲ್ಲವಾದರೆ ನೀವು ಖಂಡಿತವಾಗಿ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:19
18 ತಿಳಿವುಗಳ ಹೋಲಿಕೆ  

ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.


ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!


ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.


ನೀವು ದ್ರೋಹಿಗಳಾಗಿಯೇ ಇದ್ದರೆ ನೀವು ಮತ್ತು ನಿಮ್ಮ ಅರಸನು ನಾಶವಾಗುವಿರಿ” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸುವುದೇ ಇಲ್ಲವೆಂದು ತಿಳಿದುಕೊಳ್ಳಿರಿ. ಅವರೇ ನಿಮಗೆ ಉರುಲೂ ಬೋನೂ ಆಗಿರುವರು. ಅವರು ಪಕ್ಕೆಗೆ ಹೊಡೆಯುವ ಕೊರಡೆಯಂತೆಯೂ ಕಣ್ಣಿಗೆ ಚುಚ್ಚುವ ಮುಳ್ಳಿನಂತೆಯೂ ಇರುವರು. ಕಡೆಯಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ಈ ಉತ್ತಮ ದೇಶದಲ್ಲಿ ನೀವು ಇಲ್ಲದಂತಾಗುವಿರಿ.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.


ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,


ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.


“ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು