Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ಆ ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:2
16 ತಿಳಿವುಗಳ ಹೋಲಿಕೆ  

ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ಆತನು ಹಾದುಹೋದರೂ, ಸೆರೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?


ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.


ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.


ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.


ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.


ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.


ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು