Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು - ಯೆಹೋವನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವದಕ್ಕೆ ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀನು ಇವರಿಗೆ ಶಿಕ್ಷೆಕೊಟ್ಟರೆ ಈಜಿಪ್ಟಿನವರು, “ದೇವರು ತನ್ನ ಜನರನ್ನು ತಾನು ವಾಗ್ದಾನ ಮಾಡಿದ ದೇಶಕ್ಕೆ ನಡೆಸಲು ಅಸಮರ್ಥನಾದನು. ಆತನು ಅವರನ್ನು ದ್ವೇಷಿಸುತ್ತಾನೆ; ಆದ್ದರಿಂದ ಅವರನ್ನು ಮರುಭೂಮಿಯಲ್ಲಿ ಹತಮಾಡಲು ಕೊಂಡೊಯ್ದಿದ್ದಾನೆ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ, ಆ ದೇಶದವರು, ‘ಯೆಹೋವ ದೇವರು ಇಸ್ರಾಯೇಲರಿಗೆ ವಾಗ್ದಾನ ಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:28
7 ತಿಳಿವುಗಳ ಹೋಲಿಕೆ  

“‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.


ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.


ನೀವು ನಿಮ್ಮ ಡೇರೆಗಳಲ್ಲಿ ಗುಣುಗುಟ್ಟುತ್ತಾ, “ಯೆಹೋವನು ನಮ್ಮನ್ನು ಐಗುಪ್ತದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಆತನು ನಮ್ಮನ್ನು ಸಂಹರಿಸಬೇಕೆಂದು ಅಮೋರಿಯರ ಕೈಗೆ ಒಪ್ಪಿಸುತ್ತಾನೆ.


ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.


ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು