Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:5
34 ತಿಳಿವುಗಳ ಹೋಲಿಕೆ  

ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.


ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.


ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.


ಯೆಹೋವನ ಮುಂದೆ ಪರ್ವತಗಳು ಕರಗಿಹೋದವು, ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.


ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?


ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.


ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;


ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.


ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.


ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.


ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.


ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.


ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.


ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಆತನು ಪರ್ವತಗಳನ್ನು ಅರಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ.


ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು.


ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”


ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು