Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:7
53 ತಿಳಿವುಗಳ ಹೋಲಿಕೆ  

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.


ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.


ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?


ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.


ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.


ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.


ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.


ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.


ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ನನ್ನ ಹೆದರಿಕೆಗೆ ಕಾರಣನಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದಿ.


“ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.


ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.


ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು